July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

ಬೆಳ್ತಂಗಡಿ : ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ ಮಾ.17 ರಂದು ಮಡಂತ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಕೇಂದ್ರೀಯ ಮಾಜಿ ಅಧ್ಯಕ್ಷರು ಹಾಗೂ ಅಂತರಾಷ್ಟ್ರೀಯ ಉದ್ಯಮಿ ವಾಲ್ಟರ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಮ್ಮ ದಿಕ್ಸೂಚಿ ಭಾಷಣವನ್ನು ಮಾಡಿ ಮಾರ್ಗದರ್ಶನ ನೀಡಿದರು. 


ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ಅತೀ ವಂದನೀಯ ಸ್ವಾಮಿ ವಾಲ್ಟರ್ ಡಿಮೆಲ್ಲೋರವರು ಮಾತನಾಡಿ ಕೆಥೊಲಿಕ್ ಸಭಾದ ಬೆಳವಣಿಗೆ ಹಾಗೂ ಮುಂದಿರುವ ಯೋಜನೆಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಮಡಂತ್ಯಾರ್ ಘಟಕದ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಸ್ವಾಮಿ ಸ್ಟಾನಿ ಗೊವಿಯಸ್ ಸಂದೇಶ ನೀಡಿ ಶುಭ ಹಾರೈಸಿದರು.


ವಲಯದಿಂದ ಪದಾಧಿಕಾರಿಗಳಾಗಿ ಕೇಂದ್ರಿಯ, ಪ್ರಾಂತೀಯ ಹಾಗೂ ವಲಯದಲ್ಲಿ ಸೇವೆ ಸಲ್ಲಿಸಿದವರಿಗೆ ಹಾಗೂ ಪ್ರಸ್ತುತ ವರ್ಷದಲ್ಲಿ ವಿವಿಧ ರೀತಿಯಲ್ಲಿ ಸಾಧನೆಗೈದ ಘಟಕಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷರಾದ ಲಿಯೋ ರೋಡ್ರಿಗಸ್ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣವನ್ನು ನೀಡಿದರು.


ವೇದಿಕೆಯಲ್ಲಿ ವಲಯ ಕಾರ್ಯದರ್ಶಿ ಹಾಗೂ ಮಡಂತ್ಯಾರ್ ಘಟಕದ ಅಧ್ಯಕ್ಷರಾದ ಪಿಲಿಪ್ ಡಿಕುನ್ಹ, ಘಟಕದ ಕಾರ್ಯದರ್ಶಿ ಐವನ್ ಸಿಕ್ವೇರಾ ಉಪಸ್ಥಿತರಿದ್ದರು.
ಎಡ್ವರ್ಡ್ ರೇಗೊ ಸ್ವಾಗತಿಸಿ, ಪಿಲಿಪ್ ಡಿಕುನ್ಹ ವಂದಿಸಿ, ವಾಲ್ಟರ್ ಮೋನಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!