23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಧರ್ಮಸ್ಥಳ ಗ್ರಾಮದ ಬೂತ್ ಸಂಖ್ಯೆ 163ರ ಬೂತ್ ಅಧ್ಯಕ್ಷರಾದ ಉಮಾನಾಥ್ ಅವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು, ಸುತ್ತಮುತ್ತಲಿನವರು ಮತ್ತು ಕುಟುಂಬದವರನ್ನು ಸೇರಿಸಿಕೊಂಡು ವಿಭಿನ್ನ ರೀತಿಯಲ್ಲಿ ಆಯೋಜಿಸಬೇಕೆಂಬ ಉತ್ಸಾಹದಿಂದ ಉಮಾನಾಥರು ಅಲ್ಲಿ ಹಬ್ಬದ ವಾತಾವರಣವನ್ನೇ ಸೃಷ್ಟಿ ಮಾಡಿದ್ದರು..

ನಮ್ಮ ಪಕ್ಷದ ಸಂಘಟನೆಗೆ ಬಲ ತುಂಬುವಂತಹ ಮತ್ತು ಮನೆ ಮನೆ ಭೇಟಿಯ ಮೂಲಕ ಅಸಲಿಗೆ ಚುನಾವಣೆಯನ್ನು ಎದುರಿಸಲಿರುವ ಬೂತ್ ಮಟ್ಟದ ಕಾರ್ಯಕರ್ತರಲ್ಲಿ ತುಂಬಿದ್ದ ಉತ್ಸಾಹವನ್ನು ಕಂಡು ನನ್ನ ಭವಿಷ್ಯದ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಪ್ರೇರಣೆ ನೀಡಿತು ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್, ಜಯಾನಂದ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya
error: Content is protected !!