July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೈಂಟರ್ ಕೆಲಸ ಮಾಡುತ್ತಿರುವ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹಸಾವರ ಗಂಭೀರ ಗಾಯಗೊಂಡ ಘಟನೆ ಮಾ. 25ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸಾವರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ಎರಡನೇ ಮಗ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್(17) ಗಂಭೀರ ಗಾಯಗೊಂಡಿದ್ದಾನೆ.

ತೌಫೀಕ್ ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿ ಹೊಡೆದ ಪಿಕಪ್ ವಾಹನ ಸ್ಥಳದಿಂದ ಪರಾರಿಯಾಗಿದ್ದು ,ಬೆಳ್ತಂಗಡಿ ಸಂಚಾರಿ ಪೊಲೀಸರು ಪಿಕಪ್ ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related posts

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya
error: Content is protected !!