23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ನಡ ಇವರ ಸಹಯೋಗದಲ್ಲಿ ಮಾ.22 ರಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ನಡ ಗ್ರಾಮ ಪಂಚಾಯಿತಿಯ ಅಂಬೇಡ್ಕರ್ ಸಭಾಭವನದವರೆಗೆ ಮತದಾರರ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗೀಶ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸ್ವೀಪ್ ಸಮಿತಿ ಸದಸ್ಯರುಗಳಾದ ಶ್ರೀಮತಿ ದಿವ್ಯಾ, ಶ್ರೀಮತಿ ಶುಭ ಹಾಗೂ ಶಿವಪುತ್ರ ಸುಣಗಾರ ಮತದಾನದ ಮಹತ್ವದ ಬಗ್ಗೆ ವಿವರಿಸಿದರು.

ಶ್ರೀಮತಿ ಶಿಲ್ಪಾ ಡಿ. ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಉಪಸ್ಥಿತರಿದ್ದರು. ಕಿರಣ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರ ಮತದಾರರು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!