25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ನಡ ಇವರ ಸಹಯೋಗದಲ್ಲಿ ಮಾ.22 ರಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ನಡ ಗ್ರಾಮ ಪಂಚಾಯಿತಿಯ ಅಂಬೇಡ್ಕರ್ ಸಭಾಭವನದವರೆಗೆ ಮತದಾರರ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗೀಶ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸ್ವೀಪ್ ಸಮಿತಿ ಸದಸ್ಯರುಗಳಾದ ಶ್ರೀಮತಿ ದಿವ್ಯಾ, ಶ್ರೀಮತಿ ಶುಭ ಹಾಗೂ ಶಿವಪುತ್ರ ಸುಣಗಾರ ಮತದಾನದ ಮಹತ್ವದ ಬಗ್ಗೆ ವಿವರಿಸಿದರು.

ಶ್ರೀಮತಿ ಶಿಲ್ಪಾ ಡಿ. ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಉಪಸ್ಥಿತರಿದ್ದರು. ಕಿರಣ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರ ಮತದಾರರು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya
error: Content is protected !!