July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಮಾ.25 ರಂದು ಎದುರಿನಿಂದ ಬರುತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸವಾರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ್ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ಎರಡನೇ ಮಗ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್(17) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮಾ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಅಪಘಾತ ಬಳಿಕ ಉಜಿರೆಯ ಪಿಕಪ್ KA-19-AE-3490 ವಾಹನ ಸಮೇತ ಪರಾರಿಯಾಗಿದ್ದು. ಬಳಿಕ ಸಂಜೆ ವೇಳೆ ಸಂಚಾರಿ ಪೊಲೀಸ್ ಠಾಣೆಗೆ ವಾಹನವನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
error: Content is protected !!