30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವವು ಮಾ.25 ರಂದು ಜರುಗಿತು.

ಮಾ.24 ರಂದು ರಾತ್ರಿ ಶ್ರೀ ಗ್ರಾಮ ದೈವಗಳ ಭಂಡಾರ ತೆಗೆದು ನಂತರ ಮಾ.25ರಂದು ಬೆಳಿಗ್ಗೆ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ಮಾಸ್ತಿಕಲ್ಲು ಮಜಲು ಕೊಕ್ಕಡ ಇಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವದಲ್ಲಿ ದೈವದ ಪಾತ್ರಿಯಾಗಿ ಸುಮಾರು 35 ವರ್ಷಗಳಿಂದ ಅತ್ಯಂತ ನಿಷ್ಠೆಯಿಂದ ಹಾಗೂ ಶ್ರದ್ಧಾ ಭಕ್ತಿಯಿಂದ ಸೇವೆಯನ್ನು ಮಾಡುತ್ತ ಬರುತ್ತಿದ್ದು ಇದೀಗ ತನ್ನ ವಯೋಸಹಜ ಕಾರಣದಿಂದ ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡ ಇವರನ್ನು ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಾಲ್ವಿಕೆಯರಾದ ರಘುಚಂದ್ರ ತೋಡ್ತಿಲ್ಲಾಯ ಹಿರ್ತರಗುತ್ತು, ದೇವಿಪ್ರಸಾದ್ ಶಬರಾಯ ಅಡೈ ಜನನ, ರಾಮಯ್ಯ ಕೊಕ್ಕಡ ಪಟ್ಟೆ, ಮಹಾಬಲ ಮರಿಕೆ ಪರಾರಿ, ಆಡಳಿತ ಮೊಕ್ತೇಸರರು ಪುರುಷೋತ್ತಮ ಪೊಡಿಕೆತ್ತೂರು, ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತ್ತೂರು, ಕಾರ್ಯದರ್ಶಿ ಹರೀಶ್ ಎಳ್ಳುಗದ್ದೆ ಹಾಗೂ ಶ್ರೀ ಪಿಲಿಚಾಮುಂಡಿ ಹಾಗೂ ಸಹಪರಿವಾರ ದೈವಗಳ ಸೇವಾ ಟ್ರಸ್ಟಿಗಳು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya
error: Content is protected !!