38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಮಾ.25 ರಂದು ಎದುರಿನಿಂದ ಬರುತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸವಾರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ್ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ಎರಡನೇ ಮಗ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್(17) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮಾ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಅಪಘಾತ ಬಳಿಕ ಉಜಿರೆಯ ಪಿಕಪ್ KA-19-AE-3490 ವಾಹನ ಸಮೇತ ಪರಾರಿಯಾಗಿದ್ದು. ಬಳಿಕ ಸಂಜೆ ವೇಳೆ ಸಂಚಾರಿ ಪೊಲೀಸ್ ಠಾಣೆಗೆ ವಾಹನವನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya
error: Content is protected !!