25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ರೈತಮೋರ್ಚಾದ ಸಭೆ ಮಾ.26ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು ಅಧ್ಯಕ್ಷತೆ ವಹಿಸಿದ್ದರು.
ತಾಲೂಕಿನಲ್ಲಿ‌ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ರೈತರಿಗೆ ಆಗುತ್ತಿರುವ ಸಮಸ್ಯೆಗಳು, ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಕೇಂದ್ರದ ನರೇಂದ್ರ ಮೋದಿ ಸರ್ಕಾರವು ರೈತರಿಗೆ ನೀಡಿದ ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೃಷಿಕರು ಮತ ಚಲಾಯಿಸುವಂತೆ ಪ್ರೇರೆಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಚರ್ಚಿಸಲಾಯಿತು.


ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಲಂಬಿಲ, ಪದಾಧಿಕಾರಿಗಳಾದ ವಸಂತ ಮಠ, ವಿಜಯ ಕುಮಾರ್ ಕಲ್ಲಳಿಕೆ, ಅಶ್ವಿನಿ ಹೆಬ್ಬಾರ್ ಮುಂಡಾಜೆ, ಪಳನಿಸ್ವಾಮಿ, ನವೀನ್ ನಿಡ್ಲೆ, ಕರುಣಾಕರ ಶಿಶಿಲ, ಸಹಕಾರ ಭಾರತಿ ಅಧ್ಯಕ್ಷ ವೆಂಕಪ್ಪಯ್ಯ, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಪೆಂರ್ಬುಡ, ನಂದಕುಮಾರ್ ಉಪಸ್ಥಿತರಿದ್ದರು.

Related posts

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya
error: Content is protected !!