July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವವು ಮಾ.25 ರಂದು ಜರುಗಿತು.

ಮಾ.24 ರಂದು ರಾತ್ರಿ ಶ್ರೀ ಗ್ರಾಮ ದೈವಗಳ ಭಂಡಾರ ತೆಗೆದು ನಂತರ ಮಾ.25ರಂದು ಬೆಳಿಗ್ಗೆ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ಮಾಸ್ತಿಕಲ್ಲು ಮಜಲು ಕೊಕ್ಕಡ ಇಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವದಲ್ಲಿ ದೈವದ ಪಾತ್ರಿಯಾಗಿ ಸುಮಾರು 35 ವರ್ಷಗಳಿಂದ ಅತ್ಯಂತ ನಿಷ್ಠೆಯಿಂದ ಹಾಗೂ ಶ್ರದ್ಧಾ ಭಕ್ತಿಯಿಂದ ಸೇವೆಯನ್ನು ಮಾಡುತ್ತ ಬರುತ್ತಿದ್ದು ಇದೀಗ ತನ್ನ ವಯೋಸಹಜ ಕಾರಣದಿಂದ ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡ ಇವರನ್ನು ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಾಲ್ವಿಕೆಯರಾದ ರಘುಚಂದ್ರ ತೋಡ್ತಿಲ್ಲಾಯ ಹಿರ್ತರಗುತ್ತು, ದೇವಿಪ್ರಸಾದ್ ಶಬರಾಯ ಅಡೈ ಜನನ, ರಾಮಯ್ಯ ಕೊಕ್ಕಡ ಪಟ್ಟೆ, ಮಹಾಬಲ ಮರಿಕೆ ಪರಾರಿ, ಆಡಳಿತ ಮೊಕ್ತೇಸರರು ಪುರುಷೋತ್ತಮ ಪೊಡಿಕೆತ್ತೂರು, ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತ್ತೂರು, ಕಾರ್ಯದರ್ಶಿ ಹರೀಶ್ ಎಳ್ಳುಗದ್ದೆ ಹಾಗೂ ಶ್ರೀ ಪಿಲಿಚಾಮುಂಡಿ ಹಾಗೂ ಸಹಪರಿವಾರ ದೈವಗಳ ಸೇವಾ ಟ್ರಸ್ಟಿಗಳು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya
error: Content is protected !!