ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ನಡ ಇವರ ಸಹಯೋಗದಲ್ಲಿ ಮಾ.22 ರಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ನಡ ಗ್ರಾಮ ಪಂಚಾಯಿತಿಯ ಅಂಬೇಡ್ಕರ್ ಸಭಾಭವನದವರೆಗೆ ಮತದಾರರ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗೀಶ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸ್ವೀಪ್ ಸಮಿತಿ ಸದಸ್ಯರುಗಳಾದ ಶ್ರೀಮತಿ ದಿವ್ಯಾ, ಶ್ರೀಮತಿ ಶುಭ ಹಾಗೂ ಶಿವಪುತ್ರ ಸುಣಗಾರ ಮತದಾನದ ಮಹತ್ವದ ಬಗ್ಗೆ ವಿವರಿಸಿದರು.

ಶ್ರೀಮತಿ ಶಿಲ್ಪಾ ಡಿ. ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಉಪಸ್ಥಿತರಿದ್ದರು. ಕಿರಣ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರ ಮತದಾರರು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya
error: Content is protected !!