23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ನಡ ಇವರ ಸಹಯೋಗದಲ್ಲಿ ಮಾ.22 ರಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ನಡ ಗ್ರಾಮ ಪಂಚಾಯಿತಿಯ ಅಂಬೇಡ್ಕರ್ ಸಭಾಭವನದವರೆಗೆ ಮತದಾರರ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗೀಶ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸ್ವೀಪ್ ಸಮಿತಿ ಸದಸ್ಯರುಗಳಾದ ಶ್ರೀಮತಿ ದಿವ್ಯಾ, ಶ್ರೀಮತಿ ಶುಭ ಹಾಗೂ ಶಿವಪುತ್ರ ಸುಣಗಾರ ಮತದಾನದ ಮಹತ್ವದ ಬಗ್ಗೆ ವಿವರಿಸಿದರು.

ಶ್ರೀಮತಿ ಶಿಲ್ಪಾ ಡಿ. ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಉಪಸ್ಥಿತರಿದ್ದರು. ಕಿರಣ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರ ಮತದಾರರು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya
error: Content is protected !!