July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಮಾ.25 ರಂದು ಎದುರಿನಿಂದ ಬರುತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸವಾರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ್ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ಎರಡನೇ ಮಗ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್(17) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮಾ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಅಪಘಾತ ಬಳಿಕ ಉಜಿರೆಯ ಪಿಕಪ್ KA-19-AE-3490 ವಾಹನ ಸಮೇತ ಪರಾರಿಯಾಗಿದ್ದು. ಬಳಿಕ ಸಂಜೆ ವೇಳೆ ಸಂಚಾರಿ ಪೊಲೀಸ್ ಠಾಣೆಗೆ ವಾಹನವನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya
error: Content is protected !!