24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ರೈತಮೋರ್ಚಾದ ಸಭೆ ಮಾ.26ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು ಅಧ್ಯಕ್ಷತೆ ವಹಿಸಿದ್ದರು.
ತಾಲೂಕಿನಲ್ಲಿ‌ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ರೈತರಿಗೆ ಆಗುತ್ತಿರುವ ಸಮಸ್ಯೆಗಳು, ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಕೇಂದ್ರದ ನರೇಂದ್ರ ಮೋದಿ ಸರ್ಕಾರವು ರೈತರಿಗೆ ನೀಡಿದ ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೃಷಿಕರು ಮತ ಚಲಾಯಿಸುವಂತೆ ಪ್ರೇರೆಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಚರ್ಚಿಸಲಾಯಿತು.


ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಲಂಬಿಲ, ಪದಾಧಿಕಾರಿಗಳಾದ ವಸಂತ ಮಠ, ವಿಜಯ ಕುಮಾರ್ ಕಲ್ಲಳಿಕೆ, ಅಶ್ವಿನಿ ಹೆಬ್ಬಾರ್ ಮುಂಡಾಜೆ, ಪಳನಿಸ್ವಾಮಿ, ನವೀನ್ ನಿಡ್ಲೆ, ಕರುಣಾಕರ ಶಿಶಿಲ, ಸಹಕಾರ ಭಾರತಿ ಅಧ್ಯಕ್ಷ ವೆಂಕಪ್ಪಯ್ಯ, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಪೆಂರ್ಬುಡ, ನಂದಕುಮಾರ್ ಉಪಸ್ಥಿತರಿದ್ದರು.

Related posts

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya
error: Content is protected !!