26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವವು ಮಾ.25 ರಂದು ಜರುಗಿತು.

ಮಾ.24 ರಂದು ರಾತ್ರಿ ಶ್ರೀ ಗ್ರಾಮ ದೈವಗಳ ಭಂಡಾರ ತೆಗೆದು ನಂತರ ಮಾ.25ರಂದು ಬೆಳಿಗ್ಗೆ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ಮಾಸ್ತಿಕಲ್ಲು ಮಜಲು ಕೊಕ್ಕಡ ಇಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವದಲ್ಲಿ ದೈವದ ಪಾತ್ರಿಯಾಗಿ ಸುಮಾರು 35 ವರ್ಷಗಳಿಂದ ಅತ್ಯಂತ ನಿಷ್ಠೆಯಿಂದ ಹಾಗೂ ಶ್ರದ್ಧಾ ಭಕ್ತಿಯಿಂದ ಸೇವೆಯನ್ನು ಮಾಡುತ್ತ ಬರುತ್ತಿದ್ದು ಇದೀಗ ತನ್ನ ವಯೋಸಹಜ ಕಾರಣದಿಂದ ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡ ಇವರನ್ನು ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಾಲ್ವಿಕೆಯರಾದ ರಘುಚಂದ್ರ ತೋಡ್ತಿಲ್ಲಾಯ ಹಿರ್ತರಗುತ್ತು, ದೇವಿಪ್ರಸಾದ್ ಶಬರಾಯ ಅಡೈ ಜನನ, ರಾಮಯ್ಯ ಕೊಕ್ಕಡ ಪಟ್ಟೆ, ಮಹಾಬಲ ಮರಿಕೆ ಪರಾರಿ, ಆಡಳಿತ ಮೊಕ್ತೇಸರರು ಪುರುಷೋತ್ತಮ ಪೊಡಿಕೆತ್ತೂರು, ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತ್ತೂರು, ಕಾರ್ಯದರ್ಶಿ ಹರೀಶ್ ಎಳ್ಳುಗದ್ದೆ ಹಾಗೂ ಶ್ರೀ ಪಿಲಿಚಾಮುಂಡಿ ಹಾಗೂ ಸಹಪರಿವಾರ ದೈವಗಳ ಸೇವಾ ಟ್ರಸ್ಟಿಗಳು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya
error: Content is protected !!