27.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya
error: Content is protected !!