September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!