23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya
error: Content is protected !!