23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯರುಗಳಾದ ಗೋಪಾಲ ಭಂಡಾರಿ ಹಾಗೂ ಹರೀಶ್ ಕುಮಾರ್ ಇವರನ್ನು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಅವರ ಮುಖಂಡರ ನಿಯೋಗ ಭೇಟಿಯಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.

ಅದಲ್ಲದೆ ಮೃತದೇಹದ ಡಿಎನ್‌ಎ ಪರೀಕ್ಷೆ ಮಾಡಿ ಆದಷ್ಟು ಬೇಗ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಮಾನ್ಯ ಪರಿಷತ್ ಸದಸ್ಯರು ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಒದಗಿಸುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಕಾಂಗ್ರೆಸ್ ಮುಖಂಡರಾದ ರಂಜನ್ ಗೌಡ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯರ ಭೇಟಿಯಾದ ಎಸ್‌ಡಿಪಿಐ ನಿಯೋಗದಲ್ಲಿ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ನಿಸಾರ್ ಕುದ್ರಡ್ಕ, ನಿಜಾಮ್ ಕಟ್ಟೆ ಉಪಸ್ಥಿತರಿದ್ದರು.

Related posts

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya
error: Content is protected !!