July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ, ಯುವ ರೆಡ್ ಕ್ರಾಸ್ ಘಟಕ , ರೋವರ್ಸ್ ರೆಂಜರ್ಸ್ ಘಟಕಗಳ ಸಂಯೋಗದಲ್ಲಿ ಪ್ಲೇಸ್ಮೆಂಟ್ ಸೆಲ್ನ ಜಂಟಿ ಆಶ್ರಯದಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿ ಸ್” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು .

ಕಾರ್ಯಕ್ರಮದಲ್ಲಿ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾಲಯದ ಸುರೇಶ್ ರಾಜ್ ಹಾಗೂ ವೆಂಕಟೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರಸ್ತುತ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಹೊಸ ರೀತಿಯ ತಾಂತ್ರಿಕ ಮತ್ತು ವಿಶ್ಲೇಷಣಾತ್ಮಕ ಕೌಶಲ್ಯಗಳನ್ನು ರೂಡಿಸಿಕೊಂಡಾಗ ಮಾತ್ರ ಉದ್ಯೋಗ ಪಡೆಯಲು ಸಾಧ್ಯ ಎಂದು ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಪ್ರೊಫೆಸರ್ ಪದ್ಮನಾಭ ಕೆ, ಪ್ರೊಫೆಸರ್ ಸುರೇಶ್ ವಿ ಹಾಗೂ ರೋವರ್ಸ್ ರೆಂಜರ್ಸ್ ಘಟಕಗಳ ಡಾ. ರವಿ ಎಂ ಎನ್, ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಹಾಗೂ ಬೋಧಕ ವರ್ಗದವರು ಉಪಸ್ಥಿತರಿದ್ದರು. ಕುಮಾರಿ ಪವಿತ್ರ ಸ್ವಾಗತಿಸಿ, ಅಶ್ವಿನಿ ವಂದನಾರ್ಪಣೆ ಮಾಡಿದರು. ಕುಮಾರಿ ಪೂರ್ಣಿಮಾ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

Related posts

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya
error: Content is protected !!