25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ -ಮುಗೇರಡ್ಕ ಇದರ 25 ನೇ ವರ್ಷದ ಪ್ರಯುಕ್ತ ಬೆಳ್ಳಿಹಬ್ಬದ ಆಚರಣೆಯ ಬಗ್ಗೆ ಸಮಾಲೋಚನ ಸಭೆ ಅಲೆಕ್ಕಿ ಶಿಶುಮಂದಿರದಲ್ಲಿ ನಡೆಯಿತು.


ಸಭೆಯಲ್ಲಿ ಬೆಳ್ಳಿಹಬ್ಬ ಆಚರಣೆಯನ್ನು ಫೆಬ್ರವರಿ 15,16,17 ನೇ 2025ರಂದು 3 ದಿನ ನಡೆಸುವುದೆಂದು ತೀರ್ಮಾನಿಸಲಾಯಿತು, ಮತ್ತು ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಬೆಳ್ಳಿ ಹಬ್ಬದ ಆಚರಣಾ ಸಮಿತಿ ರಚನೆ ಮಾಡಲಾಯಿತು. ಸಂಚಾಲಕರಾಗಿ ಬಾಲಕೃಷ್ಣ ಗೌಡ ಮುಗೇರಡ್ಕ, ಅಧ್ಯಕ್ಷರಾಗಿ ಭರತೇಶ್ ಪುನ್ಕೆದಡಿ, ಉಪಾಧ್ಯಕ್ಷರಾಗಿ ಪ್ರವೀಣ್ ಗೌಡ ಮತ್ತಿಲಾರು, ಬಾಲಕೃಷ್ಣ ಗೌಡ ಅಲೆಕ್ಕಿ, ಕಾಂತಪ್ಪ ಗೌಡ ಅಲೆಕ್ಕಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಗೌಡ ಎರ್ಮಲ, ಜೊತೆ ಕಾರ್ಯದರ್ಶಿಯಾಗಿ ನಿತಿನ್ ಮುಂಡಾಜೆ, ಬಾಲಕೃಷ್ಣ ಗೌಡ ಬರುಂಗುಡೆಲ್ , ಕೋಶಾಧಿಕಾರಿಯಾಗಿ ಜಗದೀಶ್ ಗೌಡ ಅರ್ಬಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಲಬ್ ನ ಗೌರವಾಧ್ಯಕ್ಷರಾದ ಉದಯ ಭಟ್ ಅಲೆಕ್ಕಿ, ಅಧ್ಯಕ್ಷರಾದ ರಮೇಶ್ ಎನ್ ನೆಕ್ಕರಾಜೆ, ಉಪಾಧ್ಯಕ್ಷರಾದ ಸುದರ್ಶನ್ ಗೌಡ ಅಲೆಕ್ಕಿ, ಕೇಶವ ಮತ್ತಿಲಾರು, ಕಾರ್ಯದರ್ಶಿಯಾದ ನೇಮಿಚಂದ್ರ ಮುಗೇರಡ್ಕ, ಜೊತೆ ಕಾರ್ಯದರ್ಶಿಗಳಾದ ವರುಣ್ ನೆಕ್ಕರಾಜೆ, ಮಹೇಶ್ ಅರ್ಬಿ, ಕೋಶಾಧಿಕಾರಿಯಾದ ಸುಧಾಕರ ಪುನ್ಕೆದಡಿ, ಸಂಚಾಲಕರಾದ ಅಶೋಕ್ ಬರುoಗುಡೆಲು, ನಾಗೇಶ್ ಉಪ್ಪ ಹಾಗೂ ಕ್ಲಬ್ ನ ಸರ್ವಸದಸ್ಯರು ಉಪಸ್ಥಿತರಿದ್ದರು.
ನೇಮಿಚಂದ್ರ ಸ್ವಾಗತಿಸಿದರು, ಅಶೋಕ್ ಗೌಡ ವಂದನಾರ್ಪಣೆ ಸಲ್ಲಿಸಿದರು.

Related posts

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್‌‌ ವತಿಯಿಂದ ಕರಂಬಾರು ಸ. ಹಿ. ಪ್ರಾ. ಶಾಲೆಯಲ್ಲಿ ‘ಶಾಲೆಡೊಂಜಿ ದಿನ’

Suddi Udaya
error: Content is protected !!