29.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!