25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!