September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಮೇ 15: ವಿದ್ಯುತ್ ನಿಲುಗಡೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಸೇವೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!