37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

ಉಜಿರೆಯ ಪ್ರಗತಿ ಮಹಿಳಾ ಮಂಡಲದ ವತಿಯಿಂದ ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವೈಟ್ ಲಿಪ್ಟರ್ ಹಾಗೂ ಬಾಡಿ ಬಿಲ್ಡರ್ ಉಜಿರೆಯ ಕು.ಶ್ರದ್ದಾ ನಾಯ್ಕ ಹಾಗೂ ವೈದ್ಯಕೀಯ ಸವಲತ್ತುಗಳು ಇಲ್ಲದಂತಹ ಕಾಲದಲ್ಲಿ ಸಾವಿರಾರು ಹೆರಿಗೆಗಳನ್ನು ಮಾಡಿಸಿದ ನಿವೃತ್ತ ಶುಶ್ರೂಷಕಿ ಶ್ರೀಮತಿ ದೇವಮ್ಮ ಅವರುಗಳನ್ನು ಸನ್ಮಾನಿಸಲಾಯಿತು

ಕು.ಶ್ರದ್ದಾರವರು ಉಜಿರೆಯ ತೋಟಗಾರಿಕಾ ಇಲಾಖೆಯ ನಿವೃತ್ತ ಅಧಿಕಾರಿ ಸಂಜೀವ ನಾಯ್ಕ ಹಾಗೂ ಕೃಷಿ ಇಲಾಖೆಯ ಅಧಿಕಾರಿ ಶ್ರೀಮತಿ ಶೈಲಜಾ ಇವರ ಪುತ್ರಿಯಾಗಿದ್ದು ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಗೊಳ್ಳುತ್ತಿರುವ ಪ್ರತಿಭಾನ್ವಿತ ಯುವ ಕ್ರೀಡಾಪಟುವಾಗಿರುತ್ತಾಳೆ .


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಅಧ್ಯಾಪಕಿ ಶ್ರೀಮತಿ ಮನೋರಮಾ ತೋಳ್ಪಾಡಿತ್ತಾಯ , ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆಯ ಶ್ರೀಮತಿ ಸಂಧ್ಯಾ ,ಪ್ರಗತಿ ಮಹಿಳಾ ಮಂಡಲ ಉಜಿರೆಯ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಪ್ರಕಾಶ್, ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಶ್ರೀಧರ್, ಕೋಶಾಧಿಕಾರಿ ಶ್ರೀಮತಿ ಪೂರ್ಣಿಮ ಸಂಜೀವ್ ಉಪಸ್ಥಿತರಿದ್ದರು.


ನಂತರ ಉಜಿರೆಯ ನಿವೃತ್ತ ಶುಶ್ರೂಷಕಿ ಶ್ರೀಮತಿ ದೇವಮ್ಮ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು
ಕಾರ್ಯಕ್ರಮದ ಆರಂಭದಲ್ಲಿ ಸಂಘದ ಮಾರ್ಗದರ್ಶಕರಾಗಿದ್ದು ಇತ್ತೀಚಿಗೆ ದೈವಾಧೀನರಾದ ದಿ‌.ನಾ’ ವುಜಿರೆ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಶ್ರೀಮತಿ ಜಯಲಕ್ಷ್ಮಿನಾಗೇಶ್ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಸ್ವಾಗತಿಸಿದರು . ಶ್ರೀಮತಿ ಅನ್ನಪೂರ್ಣ ಪ್ರಕಾಶ್ ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ನಳಿನಿ ಇಚ್ಚಿಲ ವಂದಿಸಿದರು.

Related posts

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
error: Content is protected !!