25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತಿನ ಮನೆಯಾದ ಕೇದೆ ಮನೆಗೆ ಲೋಕಸಭಾ ಚುನಾವಣೆಯ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು.


ಗುತ್ತಿನ ಮನೆಯ ಯಜಮಾನ ಚಂದ್ರಹಾಸ ಕೇದೆ ಅವರು ಪದ್ಮರಾಜ್ ಆರ್. ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಾಜಿ ಶಾಸಕ ವಸಂತ ಬಂಗೇರ ಅವರ ತಂದೆ ದಿ. ಕೇದೆ ಸುಬ್ಬ ಪೂಜಾರಿ ಅವರ ಮನೆಯೇ ಕೇದೆ ಮನೆ.
ಬೆಳ್ತಂಗಡಿಗೆ ಮೂವರು ಶಾಸಕರನ್ನು (ಮಾಜಿ ಶಾಸಕರಾದ ಚಿದಾನಂದ ಪೂಜಾರಿ, ಕೆ. ವಸಂತ ಬಂಗೇರ, ಕೆ. ಪ್ರಭಾಕರ ಬಂಗೇರ) ನೀಡಿದ ಪ್ರತಿಷ್ಠಿತ ಬಿಲ್ಲವ ಸಮುದಾಯದ ಕೇದೆ ಗುತ್ತಿನ ಮನೆ ಇದಾಗಿದೆ.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya
error: Content is protected !!