September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತಿನ ಮನೆಯಾದ ಕೇದೆ ಮನೆಗೆ ಲೋಕಸಭಾ ಚುನಾವಣೆಯ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು.


ಗುತ್ತಿನ ಮನೆಯ ಯಜಮಾನ ಚಂದ್ರಹಾಸ ಕೇದೆ ಅವರು ಪದ್ಮರಾಜ್ ಆರ್. ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಾಜಿ ಶಾಸಕ ವಸಂತ ಬಂಗೇರ ಅವರ ತಂದೆ ದಿ. ಕೇದೆ ಸುಬ್ಬ ಪೂಜಾರಿ ಅವರ ಮನೆಯೇ ಕೇದೆ ಮನೆ.
ಬೆಳ್ತಂಗಡಿಗೆ ಮೂವರು ಶಾಸಕರನ್ನು (ಮಾಜಿ ಶಾಸಕರಾದ ಚಿದಾನಂದ ಪೂಜಾರಿ, ಕೆ. ವಸಂತ ಬಂಗೇರ, ಕೆ. ಪ್ರಭಾಕರ ಬಂಗೇರ) ನೀಡಿದ ಪ್ರತಿಷ್ಠಿತ ಬಿಲ್ಲವ ಸಮುದಾಯದ ಕೇದೆ ಗುತ್ತಿನ ಮನೆ ಇದಾಗಿದೆ.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya
error: Content is protected !!