25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯರುಗಳಾದ ಗೋಪಾಲ ಭಂಡಾರಿ ಹಾಗೂ ಹರೀಶ್ ಕುಮಾರ್ ಇವರನ್ನು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಅವರ ಮುಖಂಡರ ನಿಯೋಗ ಭೇಟಿಯಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.

ಅದಲ್ಲದೆ ಮೃತದೇಹದ ಡಿಎನ್‌ಎ ಪರೀಕ್ಷೆ ಮಾಡಿ ಆದಷ್ಟು ಬೇಗ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಮಾನ್ಯ ಪರಿಷತ್ ಸದಸ್ಯರು ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಒದಗಿಸುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಕಾಂಗ್ರೆಸ್ ಮುಖಂಡರಾದ ರಂಜನ್ ಗೌಡ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯರ ಭೇಟಿಯಾದ ಎಸ್‌ಡಿಪಿಐ ನಿಯೋಗದಲ್ಲಿ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ನಿಸಾರ್ ಕುದ್ರಡ್ಕ, ನಿಜಾಮ್ ಕಟ್ಟೆ ಉಪಸ್ಥಿತರಿದ್ದರು.

Related posts

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya
error: Content is protected !!