23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯರುಗಳಾದ ಗೋಪಾಲ ಭಂಡಾರಿ ಹಾಗೂ ಹರೀಶ್ ಕುಮಾರ್ ಇವರನ್ನು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಅವರ ಮುಖಂಡರ ನಿಯೋಗ ಭೇಟಿಯಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.

ಅದಲ್ಲದೆ ಮೃತದೇಹದ ಡಿಎನ್‌ಎ ಪರೀಕ್ಷೆ ಮಾಡಿ ಆದಷ್ಟು ಬೇಗ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಮಾನ್ಯ ಪರಿಷತ್ ಸದಸ್ಯರು ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಒದಗಿಸುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಕಾಂಗ್ರೆಸ್ ಮುಖಂಡರಾದ ರಂಜನ್ ಗೌಡ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯರ ಭೇಟಿಯಾದ ಎಸ್‌ಡಿಪಿಐ ನಿಯೋಗದಲ್ಲಿ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ನಿಸಾರ್ ಕುದ್ರಡ್ಕ, ನಿಜಾಮ್ ಕಟ್ಟೆ ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya
error: Content is protected !!