25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ‌ ಸೇವಾ ಸಂಘದ ಸಭಾಭವನದಲ್ಲಿ ಮಾ27 ರಂದು ನಡೆಯಿತು.

ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ನೇರವೇರಿಸಿ ಮಾತನಾಡಿ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ನ್ನು ಹಗಲಿರುಳು ದುಡಿದು ಗೆಲ್ಲಿಸುವ ಕೆಲಸ ಕಾಂಗ್ರೇಸ್ ಕಾರ್ಯಕರ್ತರು ಮಾಡಬೇಕಿದೆ.ಇನ್ನೊಮ್ಮೆ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಇರಲ್ಲ. ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರ ಸದೃಡವಾಗಿದ್ದು ಜಿ.ಎಸ್. ಟಿ ಕಟ್ಟುವುದರಲ್ಲಿ ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕಾರ್ಯಕರ್ತರಲ್ಲಿ ಏನಾದರೂ ಭಿನ್ನಾಭಿಪ್ರಾಯವಿದ್ದರೇ ಭಿನ್ನಾಭಿಪ್ರಾಯಕ್ಕೂ ಪಕ್ಷಕ್ಕೂ ಯಾವುದೇ ಸಂಭಂಧವಿಲ್ಲ. ಪಕ್ಷ ಬೇರೆ, ಭಿನ್ನಾಭಿಪ್ರಾಯ ಬೇರೆ ಎಂದರು.

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಮಾತನಾಡಿ ಕಳೆದ 33 ವರ್ಷಗಳಿಂದ ಕಾಂಗ್ರೇಸ್ ಪಕ್ಷದ ಲೋಕಸಭಾ ಸದಸ್ಯರಿಲ್ಲದ ಹಸಿವನ್ನು ಈ ಬಾರಿ ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಸಂಕಲ್ಪ ಮಾಡಬೇಕಿದೆ.ಮತ್ತೊಮ್ಮೆ ಸಾಮರಸ್ಯದ ಗತವೈಭವನ್ನು ಸ್ಥಾಪಿಸುವ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ,ಚುನಾವಣಾ ಉಸ್ತುವಾರಿ ರಕ್ಷಿತ್ ಶಿವರಾಮ್ ವಹಿಸಿದ್ದರು.

ವೇದಿಕೆಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ, ಮಾಜಿ ಸಚಿವ ರಮಾನಾಥ ರೈ,ಮಾಜಿ ಸಚಿವ ಗಂಗಾಧರ ಗೌಡ,ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಗೌಡ,ಕೆಪಿಸಿಸಿ ಸದಸ್ಯ ರಾಜ್ ಶೇಖರ್ ಅಜ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜನ್ ಜಿ ಗೌಡ, ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಎಸ್ಸಿ ಜಿಲ್ಲಾ ಘಟಕದ ಅಧ್ಯಕ್ಷ ಶೇಖರ್ ಕುಕ್ಕೇಡಿ, ಮಹಿಳಾ ಘಟಕದ ಅಧ್ಯಕ್ಷರಾದ ಲೋಕೇಶ್ವರಿ ವಿನಯಚ್ಚಂದ್ರ,ನಮಿತಾ, ವಂದನಾ ಭಂಡಾರಿ,ಇಸ್ಮಾಯಿಲ್ ಪೆರಿಂಜೆ, ಚಾರ್ಮಾಡಿ ಹಸನಬ್ಬ,ಯೂತ್ ಕಾಂಗ್ರೇಸ್ ಅಧ್ಯಕ್ಷ ಹಾಗೂ ಪಕ್ಷದ ನಾಯಕರು ಉಪಸ್ಥಿತರಿದ್ದರು .

ಕಾಂಗ್ರೇಸ್ ಪಕ್ಷಕ್ಕೆ ಮಾಲಾಡಿ ಗ್ರಾ.ಪಂ ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ,ಪಡಂಗಡಿ ಗ್ರಾ.ಪಂ ಸದಸ್ಯೆ ಕವಿತಾ ಮೋನಿಸ್ ಹಾಗೂ ಹೃಷಿಕೇಶ್ ಜೈನ್, ಮುನೀರ್ ಸೇರ್ಪಡೆಗೊಂಡರು.

ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸತೀಶ್ ಬಂಗೇರ ಕಾಶಿಪಟ್ಣ ಸ್ವಾಗತಿಸಿದರು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya
error: Content is protected !!