30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಐಟಿಐ ಕಾಲೇಜು ಮಾಲಾಡಿಯಲ್ಲಿ ಮಾ. 27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷ ವೈಜಣ್ಣ , ಕಾಲೇಜಿನ ಪ್ರಾಂಶುಪಾಲರಾದ ರಮೇಶ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ ,
ತಾ.ಪಂ.ಅಧೀಕ್ಷಕರಾದ ಡಿ. ಪ್ರಶಾಂತ್ ಮಾಲಾಡಿ ಗ್ರಾ.ಪಂ ನ ಕಾರ್ಯದರ್ಶಿ ಯಶೋಧರ ಶೆಟ್ಟಿ ಹಾಗೂ ನರೆಗಾ ಯೋಜನೆಯ ಐಇಸಿ ಸಂಯೋಜಕರಾದ ವಿನಿಷ ಹಾಗೂ 130 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುವುದು ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಯುವ ಮತದಾರರು ತಮ್ಮ ತಮ್ಮ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಖಚಿತಪಡಿಸಿಕೊಂಡು ತಪ್ಪದೇ ಮತದಾನದಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರು ಪ್ರಮುಖ ಪಾತ್ರ ವಹಿಸಬೇಕೆಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಎಲ್ಲರ ಸಹಕಾರ ಕೋರಿದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!