September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಐಟಿಐ ಕಾಲೇಜು ಮಾಲಾಡಿಯಲ್ಲಿ ಮಾ. 27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷ ವೈಜಣ್ಣ , ಕಾಲೇಜಿನ ಪ್ರಾಂಶುಪಾಲರಾದ ರಮೇಶ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ ,
ತಾ.ಪಂ.ಅಧೀಕ್ಷಕರಾದ ಡಿ. ಪ್ರಶಾಂತ್ ಮಾಲಾಡಿ ಗ್ರಾ.ಪಂ ನ ಕಾರ್ಯದರ್ಶಿ ಯಶೋಧರ ಶೆಟ್ಟಿ ಹಾಗೂ ನರೆಗಾ ಯೋಜನೆಯ ಐಇಸಿ ಸಂಯೋಜಕರಾದ ವಿನಿಷ ಹಾಗೂ 130 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುವುದು ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಯುವ ಮತದಾರರು ತಮ್ಮ ತಮ್ಮ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಖಚಿತಪಡಿಸಿಕೊಂಡು ತಪ್ಪದೇ ಮತದಾನದಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರು ಪ್ರಮುಖ ಪಾತ್ರ ವಹಿಸಬೇಕೆಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಎಲ್ಲರ ಸಹಕಾರ ಕೋರಿದರು.

Related posts

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!