22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

ಉಜಿರೆ: ನಾವು ಕಲಿಯುವಂತ ವಿಷಯವನ್ನು ಪ್ರಾಯೋಗಿಕವಾಗಿ ಆಳವಡಿಸಿದಾಗ ನಮ್ಮ ಜ್ಞಾನ ವೃದ್ಧಿಯಾಗುತ್ತಿದೆ. ಇದನ್ನು ನಮ್ಮಿಂದ ಕಸಿದುಕೊಳ್ಳಲು ಯಾರಿಂದಲೂ ಅಸಾಧ್ಯ. ಇದರಿಂದ ನಾವು ಜೀವನದಲ್ಲಿ ಉತ್ತುಂಗಕ್ಕೆ ಏರಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರಿನ ಇಸಿ ವಿಭಾಗದ ಸಹಾಯಕ ಪ್ರಾಧ್ಯಪಕ ಡಾ| ಮಹಾಂತೇಶ್ ಚೌಧರಿ ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಇ ಸಿ ವಿಭಾಗದಿಂದ ಕಾಲೇಜಿನಲ್ಲಿ ಹಮ್ಮಿಕೊಂಡ ಸರ್ಕ್ಯುಟ್ ಎಕ್ಸ್ ಪೋ 2024 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಸ್.ಡಿ.ಎಮ್. ಪಾಲಿಟೆಕ್ನಿಕ್ ಹಳೆಯ ವಿದ್ಯಾರ್ಥಿ ಅನ್ವಿನ್ ನಾಯ್ಕ ಅಸಿಸ್ಟೆಂಟ್ ಮ್ಯಾನೇಜರ್ ಲೆಕ್ಸಾ ಲೈಟಿಂಗ್‌ ಟೆಕ್ನೊಲೋಜಿಸ್ ಪ್ರೆರ್ವೈಟ್ ಲಿಮಿಟೆಡ್ ಮೂಡಬಿದ್ರೆ ಇವರು ತಮ್ಮ ಅನುಭವವನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು. ಕಾಲೇಜು ವ್ಯವಸ್ಥಾಪಕ ಚಂದ್ರನಾಥ ಜೈನ್, ವಿಭಾಗ ಮುಖ್ಯಸ್ಥೆ ಮೇರಿ ಸ್ಮಿತಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳೀಗೆ ರೋಬೋ ರೇಸ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸ್ನೇಹಾ ಇ.ಆರ್ ಸ್ವಾಗತಿಸಿದರು. ಜೀವನ್ ಕೆ.ವಿ ನಿರೂಪಿಸಿ, ಅನನ್ಯಾ ವಂದಿಸಿದರು.

Related posts

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya
error: Content is protected !!