September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಮೊಗ್ರು: ಪುಣ್ಕೆತಡಿ ನಿವಾಸಿ ಉಮ್ಮಕ್ಕ ನಿಧನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya
error: Content is protected !!