23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!