Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯರುಗಳಾದ ಗೋಪಾಲ ಭಂಡಾರಿ ಹಾಗೂ ಹರೀಶ್ ಕುಮಾರ್ ಇವರನ್ನು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಅವರ ಮುಖಂಡರ ನಿಯೋಗ ಭೇಟಿಯಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.

ಅದಲ್ಲದೆ ಮೃತದೇಹದ ಡಿಎನ್‌ಎ ಪರೀಕ್ಷೆ ಮಾಡಿ ಆದಷ್ಟು ಬೇಗ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಮಾನ್ಯ ಪರಿಷತ್ ಸದಸ್ಯರು ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಒದಗಿಸುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಕಾಂಗ್ರೆಸ್ ಮುಖಂಡರಾದ ರಂಜನ್ ಗೌಡ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯರ ಭೇಟಿಯಾದ ಎಸ್‌ಡಿಪಿಐ ನಿಯೋಗದಲ್ಲಿ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ನಿಸಾರ್ ಕುದ್ರಡ್ಕ, ನಿಜಾಮ್ ಕಟ್ಟೆ ಉಪಸ್ಥಿತರಿದ್ದರು.

Related posts

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!