25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಐಟಿಐ ಕಾಲೇಜು ಮಾಲಾಡಿಯಲ್ಲಿ ಮಾ. 27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷ ವೈಜಣ್ಣ , ಕಾಲೇಜಿನ ಪ್ರಾಂಶುಪಾಲರಾದ ರಮೇಶ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ ,
ತಾ.ಪಂ.ಅಧೀಕ್ಷಕರಾದ ಡಿ. ಪ್ರಶಾಂತ್ ಮಾಲಾಡಿ ಗ್ರಾ.ಪಂ ನ ಕಾರ್ಯದರ್ಶಿ ಯಶೋಧರ ಶೆಟ್ಟಿ ಹಾಗೂ ನರೆಗಾ ಯೋಜನೆಯ ಐಇಸಿ ಸಂಯೋಜಕರಾದ ವಿನಿಷ ಹಾಗೂ 130 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುವುದು ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಯುವ ಮತದಾರರು ತಮ್ಮ ತಮ್ಮ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಖಚಿತಪಡಿಸಿಕೊಂಡು ತಪ್ಪದೇ ಮತದಾನದಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರು ಪ್ರಮುಖ ಪಾತ್ರ ವಹಿಸಬೇಕೆಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಎಲ್ಲರ ಸಹಕಾರ ಕೋರಿದರು.

Related posts

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya
error: Content is protected !!