22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

ಬೆಳ್ತಂಗಡಿ; ನಮ್ಮ ಆದಾಯದ ಮೂಲದಿಂದ ಅಳತೆ ಮಾಡಿ ಅದನ್ನು ಅರ್ಹರಿಗೆ ವಿತರಿಸಲು ಇಸ್ಲಾಂ ನಿರ್ದೇಶಿಸುತ್ತದೆ. ಇದೇ ಪ್ರಕಾರ ಎಲ್ಲರೂ ನಡೆದುಕೊಂಡರೆ ಇಸ್ಲಾಂ ನಲ್ಲಿ ಬಡತನ ಎಂಬುದು ನಿವಾರಣೆಯಾಗಬಹುದು ಎಂದು ಸಾದಾತ್ ತಂಙಳ್ ಹೇಳಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕೆಎಮ್‌ಜೆ, ಸುನ್ನೀ ಯುವಜನ ಸಂಘ ಎಸ್‌ವೈಎಸ್, ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್, ಗುರುವಾಯನಕೆರೆ ಮತ್ತು ಸುನ್ನತ್‌ಕೆರೆ ಯುನಿಟ್ ಗಳ ವತಿಯಿಂದ ಪ್ರತೀ ರಂಝಾನ್ ತಿಂಗಳಲ್ಲಿ ನಡೆಸುವ ಅರ್ಹರಿಗೆ ಆಹಾರದ ಕಿಟ್ ವಿತರಣೆ, ಮಹ್ಲರತುಲ್ ಬದ್ರಿಯ್ಯಾ ಮಜ್ಲಿಸ್ ಮತ್ತು ಸಾಮೂಹಿಕ ಇಫ್ತಾರ್ ಕೂಟದಲ್ಲಿ ಅವರು ಆಶೀರ್ವಚನ ನೀಡಿದರು.ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಕಾರ್ಯಕ್ರಮ ನಡೆಯಿತು.


ಈ ಬಾರಿ ಜಮಾಅತ್ ವ್ಯಾಪ್ತಿಯ ಆಯ್ದ 85 ಕುಟುಂಬಗಳಿಗೆ ರಂಜಾನ್ ಕಿಟ್ ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಎಸ್‌ವೈಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷ ಹಾಜಿ ಹಸೈನಾರ್ ಶಾಫಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜುನೈದ್ ಸಖಾಪಿ ಮುದರಿಸ್ ಗುರುವಾಯನಕೆರೆ, ದರ್ಗಾ ಸಮಿತಿ ಅಧ್ಯಕ್ಷ ಯಾಕೂಬ್ ಮುಸ್ಲಿಯರ್ ಮೇಲಂತಬೆಟ್ಟು, ಮುಸ್ಲಿಂ ಜಮಾಅತ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷ ಹಮೀದ್ ಮುಸ್ಲಿಯರ್ , ಜಮಾಅತ್ ಅಧ್ಯಕ್ಷ ಹಾಜಿ ಉಸ್ಮಾನ್ ಶಾಫಿ ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya
error: Content is protected !!