ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಶಿರ್ಲಾಲು : ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು-ಶಿರ್ಲಾಲು ಶ್ರೀ ದೇವಿ ಮಹಿಳಾ ಕೇಂದ್ರ ಬದ್ಯಾರು-ಶಿರ್ಲಾಲು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶಿರ್ಲಾಲು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ ಎ.15 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ನಲ್ಲಿ ನಡೆಯಲಿದೆ.

ಬೆಳಿಗ್ಗೆ ಪೂಜೆ, ಏಕಾಹ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ, ಅನ್ನಸಂತರ್ಪಣೆ, ಸಂಜೆ ಬೆಳ್ಳಿಹಬ್ಬದ ಕಾರ್ಯಕ್ರಮ , ಸಂಜೆ 6.00 ಭಜನಾ ಕಮ್ಮಟೋತ್ಸವ ನಡೆಯಲಿದೆ.

ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಪಾಂಗಾಲ್ದಾಡಿ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಯ ತಂತ್ರಿಗಳು ಆಶೀರ್ವಚನ ನೀಡಲಿದ್ದಾರೆ.

ಉದ್ಘಾಟನೆಯನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ। ಪದ್ಮಪ್ರಸಾದ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಗನ್ನಾಥ ಕುಲಾಲ್ ಬೈರೊಟ್ಟು ವಹಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Leave a Comment

error: Content is protected !!