26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

ಶಿರ್ಲಾಲು : ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು-ಶಿರ್ಲಾಲು ಶ್ರೀ ದೇವಿ ಮಹಿಳಾ ಕೇಂದ್ರ ಬದ್ಯಾರು-ಶಿರ್ಲಾಲು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶಿರ್ಲಾಲು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ ಎ.15 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ನಲ್ಲಿ ನಡೆಯಲಿದೆ.

ಬೆಳಿಗ್ಗೆ ಪೂಜೆ, ಏಕಾಹ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ, ಅನ್ನಸಂತರ್ಪಣೆ, ಸಂಜೆ ಬೆಳ್ಳಿಹಬ್ಬದ ಕಾರ್ಯಕ್ರಮ , ಸಂಜೆ 6.00 ಭಜನಾ ಕಮ್ಮಟೋತ್ಸವ ನಡೆಯಲಿದೆ.

ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಪಾಂಗಾಲ್ದಾಡಿ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಯ ತಂತ್ರಿಗಳು ಆಶೀರ್ವಚನ ನೀಡಲಿದ್ದಾರೆ.

ಉದ್ಘಾಟನೆಯನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ। ಪದ್ಮಪ್ರಸಾದ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಗನ್ನಾಥ ಕುಲಾಲ್ ಬೈರೊಟ್ಟು ವಹಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya
error: Content is protected !!