September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವದ ಕೊನೆಯ ದಿನವಾದ ಇಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಬಿ. ಕೆ. ಲೋಕೇಶ್ ರಾವ್ ವಹಿಸಿದರು.

ಸುರೇಶ್ ಪರ್ಕಳ ಧಾರ್ಮಿಕ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ಜಾನುವಾರು ಅಧಿಕಾರಿ ಶ್ರೀನಿವಾಸ ತೋಡ್ತಿಲ್ಲಾಯ, ಗಣೇಶ್ ಆಚಾರ್ಯ, ಚಾರ್ಮಾಡಿ ಕಜಕ್ಕೆ ಗೋಪಾಲಕೃಷ್ಣ ದೇವಸ್ಥಾನ ಅಧ್ಯಕ್ಷ ಪಾಂಡುರಂಗ ಮರಾಠೆ, ಇಂದಬೆಟ್ಟು ಅರ್ಧನಾರೀಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂಜೀವ ಮನ್ನಡ್ಕ,, ಜಯದುರ್ಗೆ ಬೈಲುವಾರು ಸಮಿತಿ ಪ್ರಮುಖರು ಜಯಂತ ಹೆಗ್ಡೆ ಹೊಸ್ತೋಟ, ಲಕ್ಷ್ಮೀದೇವಿ ಬೈಲುವಾರು ಸಮಿತಿ ಪ್ರಮುಖರು ಭಾಸ್ಕರ ಗೌಡ ಪಲದ್ರೋಟ್ಟು, ಶಾಂಭವಿ ಬೈಲುವಾರು ಸಮಿತಿ ಪ್ರಮುಖರು ನಾರಾಯಣ ಗೌಡ ನೆಕ್ಕಿಲೊಟ್ಟು, ದಾಕ್ಷಾಯಿಣಿ ಬೈಲುವಾರು ಸಮಿತಿ ಪ್ರಮುಖರು ನಾರಾಯಣ ಮಲೆಕುಡಿಯ ಕೊಲ್ಲಾಲ್, ಬೇಬಿ ಸದಾಶಿವ ಗೌಡ, ವಸಂತ ಕಲಪ್ಪಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ, ಬೈಲುವಾರು ಸಮಿತಿಯ ರವೀಂದ್ರ ಪೂಜಾರಿ, ಆನಂದ ಗೌಡ , ಲಕ್ಷ್ಮಣ ಪೂಜಾರಿ, ಗೋಪಾಲ ಗೌಡ, ದೀಕ್ಷಿತ್ ಹೆಚ್, ಸಂಜೀವ ಗೌಡ, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

ಗಾಯತ್ರಿದೇವಿ ಪ್ರಾರ್ಥಿಸಿದರು. ‍ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು ಸ್ವಾಗತಿಸಿ, ಸತೀಶ್ ಕಾಮತ್ ಧನ್ಯವಾದವಿತ್ತರು.

ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳಾದ ಕವಾಟೋದ್ಘಾಟನೆ, ತೈಲಾಭಿಷೇಕ, ಮಹಾಬಲಿಪೀಠ ಪ್ರತಿಷ್ಠೆ, ಹೋಮಕಲಶಾಭಿಷೇಕ, ತತ್ವ ಕಲಶಾಭಿಷೇಕ, ಧ್ವಜಪ್ರತಿಷ್ಠೆ, ಪರಿಕಲಶಾಭಿಷೇಕ, ಕುಂಬೇಶಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ ನಡೆಯಿತು.

Related posts

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya
error: Content is protected !!