ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತಣ್ಣೀರುಪಂಥ : ಇಲ್ಲಿಯ ಮಡ್ಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಮಾ.27ರಂದು ನಡೆದಿದೆ.

ತಣ್ಣೀರುಪಂಥ ಗ್ರಾಮದ, ಮಡ್ಯೊಟ್ಟು ಎಂಬಲ್ಲಿ ಮಾ.26ರಂದು ದಿವಾಕರ ಶೆಟ್ಟಿ (59 ವರ್ಷ) ರವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ತೋಟದಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡವರನ್ನು ಪುತ್ರ ಭವಂತು ಹಾಗೂ ಅವರ ತಾಯಿ ಹಾಗೂ ಇತರರು ಚಿಕಿತ್ಸೆಗಾಗಿ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆ, ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿದ್ದವರು ಮಾ.27 ರಂದು ಬೆಳಗ್ಗಿನ ಜಾವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಭವಂತು ಅವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣಾ ಯುಡಿಆರ್‌ ನಂಬ್ರ 07/2024 ಕಲಂ: 174 ಸಿಆರ್‌ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ

Leave a Comment

error: Content is protected !!