25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

ಪಟ್ರಮೆ :ಇಲ್ಲಿಯ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದಿಂದ ಹಳದಿ ದಿನ ಆಚರಿಸಲಾಯಿತು.


ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವ, ಬಳಕೆ ಮತ್ತು ಉಪಯೋಗದ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಈ ರೀತಿಯ ಪ್ರಾಯೋಗಿಕವಾಗಿ ಕಾರ್ಯಕ್ರಮಗಳನ್ನು ಮಾಡಿದಾಗ ಬೇಗನೆ ಕಲಿತುಕೊಳ್ಳುತ್ತಾರೆ. ಕೇವಲ ಓದುವುದು ಬರೆಯುವುದು ಮಾತ್ರವಲ್ಲದೆ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದರು.


ಶಾಲಾ ಆಂಗ್ಲ ಭಾಷಾ ದಿಲೀಪ್ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವವನ್ನು ತಿಳಿಸುವುದರೊಂದಿಗೆ, ಪ್ರಾಮುಖ್ಯತೆ, ಹಾಗೂ ಪ್ರಯೋಜನವನ್ನು ತಿಳಿಸಿದರು. ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ. ವಿ, ಶಿಕ್ಷಕಿ ವನಿತಾ ಸಹ ಶಿಕ್ಷಕರಾದ ಸುಪ್ರೀತಾ ಎ, ಶ್ವೇತ ಕುಮಾರಿ ಎಂ ಪಿ, ಶುಭಲಕ್ಷ್ಮಿ, ರೇಶ್ಮಾ, ಕಲ್ಪನಾ ಚಿಪಳೂಣ್ಕರ್, ಭವ್ಯ ಪಿ.ಡಿ, ಕುಸುಮಾವತಿ ಸಹಕರಿಸಿದರು.

Related posts

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!