September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

ಪಟ್ರಮೆ :ಇಲ್ಲಿಯ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದಿಂದ ಹಳದಿ ದಿನ ಆಚರಿಸಲಾಯಿತು.


ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವ, ಬಳಕೆ ಮತ್ತು ಉಪಯೋಗದ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಈ ರೀತಿಯ ಪ್ರಾಯೋಗಿಕವಾಗಿ ಕಾರ್ಯಕ್ರಮಗಳನ್ನು ಮಾಡಿದಾಗ ಬೇಗನೆ ಕಲಿತುಕೊಳ್ಳುತ್ತಾರೆ. ಕೇವಲ ಓದುವುದು ಬರೆಯುವುದು ಮಾತ್ರವಲ್ಲದೆ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದರು.


ಶಾಲಾ ಆಂಗ್ಲ ಭಾಷಾ ದಿಲೀಪ್ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವವನ್ನು ತಿಳಿಸುವುದರೊಂದಿಗೆ, ಪ್ರಾಮುಖ್ಯತೆ, ಹಾಗೂ ಪ್ರಯೋಜನವನ್ನು ತಿಳಿಸಿದರು. ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ. ವಿ, ಶಿಕ್ಷಕಿ ವನಿತಾ ಸಹ ಶಿಕ್ಷಕರಾದ ಸುಪ್ರೀತಾ ಎ, ಶ್ವೇತ ಕುಮಾರಿ ಎಂ ಪಿ, ಶುಭಲಕ್ಷ್ಮಿ, ರೇಶ್ಮಾ, ಕಲ್ಪನಾ ಚಿಪಳೂಣ್ಕರ್, ಭವ್ಯ ಪಿ.ಡಿ, ಕುಸುಮಾವತಿ ಸಹಕರಿಸಿದರು.

Related posts

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!