23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯು ಮಾ.27ರಂದು ನಡೆಯಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಾಸ್ತಾವಿಕ ಮಾತನಾಡಿ ಲೋಕಸಭಾ ಚುನಾವಣೆ ಪೂರ್ವಭಾವಿ ಬಗ್ಗೆ ಚುನಾವಣೆ ಪ್ರಚಾರ ನಡೆಸುವ ಬಗ್ಗೆ ವಿವರಿಸಿದರು.
ಈ ವೇಳೆ ಶಾಸಕ ಹರೀಶ್ ಪೂಂಜ ಮಾತನಾಡಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ದಕ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅತೀ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲು ಕರೆ ಕೊಟ್ಟರು ಮತ್ತು ಮಾ. 30 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಲಿರುವ ಬೆಳ್ತಂಗಡಿ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ನಡೆಸುವ ಬಗ್ಗೆ ತಿಳಿಸಿ ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆಕೊಟ್ಟರು.

ಬಿಜೆಪಿ ದಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು ಹಾಗೂ ಮಂಡಲ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya
error: Content is protected !!