July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯು ಮಾ.27ರಂದು ನಡೆಯಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಾಸ್ತಾವಿಕ ಮಾತನಾಡಿ ಲೋಕಸಭಾ ಚುನಾವಣೆ ಪೂರ್ವಭಾವಿ ಬಗ್ಗೆ ಚುನಾವಣೆ ಪ್ರಚಾರ ನಡೆಸುವ ಬಗ್ಗೆ ವಿವರಿಸಿದರು.
ಈ ವೇಳೆ ಶಾಸಕ ಹರೀಶ್ ಪೂಂಜ ಮಾತನಾಡಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ದಕ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅತೀ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲು ಕರೆ ಕೊಟ್ಟರು ಮತ್ತು ಮಾ. 30 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಲಿರುವ ಬೆಳ್ತಂಗಡಿ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ನಡೆಸುವ ಬಗ್ಗೆ ತಿಳಿಸಿ ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆಕೊಟ್ಟರು.

ಬಿಜೆಪಿ ದಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು ಹಾಗೂ ಮಂಡಲ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya
error: Content is protected !!