23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ‌ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಘಟನೆಯ ವಿವರ: ಶೇಖರ್ ಬಂಗೇರರವರು ‌ಇಂದು ರಾತ್ರಿ ಸಮಡೈನ್ ಹೋಟೇಲ್ ನಿಂದ ಪುಡ್ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಬಂದು ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಳೆಯಲ್ಪಟ್ಟು ಶೇಖರ ಬಂಗೇರ ಗಂಭೀರ ಗಾಯಗೊಂಡರು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ದಾರಿ ಮಧ್ಯೆ ಅವರು ಮೃತಪಟ್ಟರು.

ಸ್ಕೂಟಿ ಸವಾರರು ಕೂಡಾ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶೇಖರ ಬಂಗೇರ ಅವರು ನಿವೃತ್ತ ವಿಜಯಾ ಬ್ಯಾಂಕ್ ಮೆನೇಜರ್ ಆಗಿದ್ದು,ಲಾಯಿಲ ರಾಘವೇಂದ್ರ ಸ್ವಾಮಿ ಪ್ರತಿಷ್ಠಾನದ ಮಾಜಿ ಅಧ್ಯಕ್ಷರಾಗಿ, ಹಲವಾರು ಸಂಘ- ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇವರು ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆಯವರ ಸಹೋದರ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!