July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸದ್ರಿಯವರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಲ್ಲಿ ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿರುವ. ಲಕ್ಷ್ಮೀನಾರಾಯಣ ಅವರು ಮಾ. 27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಅಮ್ಟಾಡಿ ಪಂಚಾಯತ್‌ ನಲ್ಲಿ ವಿಚಾರಿಸಿದಾಗ, ಸದ್ರಿಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿರುತ್ತಾರೆ.

ಆದರೆ ಲಕ್ಷ್ಮೀನಾರಾಯಣ ಕೆ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024ರಂತೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya
error: Content is protected !!