July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

ವೇಣೂರು: ಮೂಡುಕೋಡಿ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ಮಾಡಿದ ಘಟನೆ ಮಾ.27 ರಂದು ನಡೆದಿದೆ.

ಮೂಡಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ, ಆರೋಪಿಯಾದ ಮೂಡುಕೋಡಿ ನಿವಾಸಿ, ಶೇಖರ ಶೆಟ್ಟಿ ಎಂಬಾತನು ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ವೇಣೂರು ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ, ಆರೋಪಿತನ ವಶದಲ್ಲಿದ್ದ 1469/- ರೂ ಮೌಲ್ಯದ, ತಲಾ 180 ಎಂ.ಎಲ್. ಮದ್ಯ ತುಂಬಿದ 17 ಸ್ಯಾಚೆಟ್‌ ಗಳು ಹಾಗೂ ತಲಾ 90 ಎಂ, ಎಲ್.‌ ಮದ್ಯ ತುಂಬಿದ 07 ಸ್ಯಾಚೆಟ್‌ ಗಳನ್ನು (3.690 ಲೀಟರ್‌ ಮದ್ಯ) ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ 30/2024 ಕಲಂ: 32, 34 ಅಬಕಾರಿ ಕಾಯ್ದೆ-1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya
error: Content is protected !!