25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

ಉಜಿರೆ : “ಸ್ವಾರ್ಥವಿಲ್ಲದೆ ಸೇವೆ ಮಾಡುವವರು ನಮ್ಮ ಸ್ಕೌಟ್ ವಿದ್ಯಾರ್ಥಿಗಳು. ದೇವರಿಗೆ, ಜನರಿಗೆ ಮತ್ತು ದೇಶಕ್ಕಾಗಿ ನಿಸ್ವಾರ್ಥ ಸೇವೆ ಮಾಡುವವರು ಇವರು” ಎಂದು ಮುಂಡತ್ತೋಡಿ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸೇವಂತಿ. ಬಿ ಹೇಳಿದರು.


ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಯೋಜಿಸಿದ್ದ ಸ್ಕೌಟ್ ಗೈಡ್ ಬೇಸಿಗೆ ಶಿಬಿರದ ಉದ್ಘಾಟಕರಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಭಾರತ್ ಸ್ಕೌಟ್ ಆಂಡ್ ಗೈಡ್ಸ್ ರಾಜ್ಯ ಸಹಾಯಕ ಸಂಘಟನ ಆಯುಕ್ತರಾದ ಭರತ್ ರಾಜ್ ಶಿಬಿರ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.
ಎಸ್.ಡಿ.ಎಮ್ ಪದವಿ ಕಾಲೇಜಿನ ರೋವರ್ ರೇಂಜರ್ ವಿದ್ಯಾರ್ಥಿಗಳ ಸಹಕಾರದೊಂದಿಗೆ ಶಾಲಾ ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಕಾರ್ಯಕ್ರಮ ಆಯೋಜಿಸಿದ್ದರು.

Related posts

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!